ರಾಜ್ಯದಲ್ಲಿ ಇವತ್ತಿನಿಂದ ಜನವರಿ 2ರ ವರೆಗೆ ನೈಟ್ ಕರ್ಫ್ಯೂ ಜಾರಿ - ಸಿಎಂ ಬಿಎಸ್ವೈ
ಶಾಲಾ-ಕಾಲೇಜು ಈಗಾಗಲೇ ನಿರ್ಧರಿಸಿದ್ದೇವೆ. ಅದು ಯತಾಪ್ರಕಾರ ಮುಂದುವರಿಯಲಿದೆ

X
Admin 223 Dec 2020 7:30 AM GMT
ಬೆಂಗಳೂರು: ರೂಪಾಂತರ ಕೊರೊನಾ ವೈರಸ್ ಹಿನ್ನೆಲೆ ಇಂದು ರಾತ್ರಿಯಿಂದಲೇ ರಾಜ್ಯದಾದ್ಯಂತ ರಾತ್ರಿ ಕರ್ಪ್ಯೂ ಜಾರಿ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಘೋಷಣೆ ಮಾಡಿದ್ದಾರೆ.
ನಗರದಲ್ಲಿಂದು ಮಾಧ್ಯಮದ ಮಿತ್ರರೊಂದಿಗೆ ಮಾತನಾಡಿದ ಅವರು, ನೈಟ್ ಕರ್ಫ್ಯೂ ರಾತ್ರಿ 10 ರಿಂದ ಬೆಳಗ್ಗೆ 6ರ ವರೆಗೆ ಇರಲಿದ್ದು, ಜನವರಿ 2, 2021ರ ವರೆಗೆ ರಾತ್ರಿ ಕರ್ಪ್ಯೂ ಇರುತ್ತದೆ. ಇದು ಇಡೀ ರಾಜ್ಯಕ್ಕೆ ಅನ್ವಯವಾಗುತ್ತದೆ ಎಂದರು.
ಸದ್ಯ ಹೊರಗಿನಿಂದ ಬರುವವರಿಗೆ ಟೆಸ್ಟ್ ಸರ್ಟಿಫಿಕೆಟ್ ಕಡ್ಡಾಯವಾಗಿದ್ದು, 72ಗಂಟೆಯೊಳಗೆ ಮಾಡಿಸಿರಬೇಕು. ಆ ರಿಪೋರ್ಟ್ ಇದ್ದರೆ ಮಾತ್ರ ಅನುಮತಿ ನೀಡಲಾಗುವುದು. ಏರ್ಪೋರ್ಟ್ಗಳಲ್ಲೂ ಇದನ್ನ ಕಡ್ಡಾಯ ಮಾಡಿದ್ದೇವೆ ಎಂದು ಸಿಎಂ ತಿಳಿಸಿದರು.
ಇನ್ನು ಶಾಲಾ-ಕಾಲೇಜು ಈಗಾಗಲೇ ನಿರ್ಧರಿಸಿದ್ದೇವೆ. ಅದು ಯತಾಪ್ರಕಾರ ಮುಂದುವರಿಯಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಹೇಳಿದರು.
Next Story